ಶನಿವಾರ, ಡಿಸೆಂಬರ್ 25, 2010

ಸಾಹಿತ್ಯ ಸಮ್ಮೇಳನಕ್ಕೆ ನೋಂದಣಿ

ಬೆಂಗಳೂರು : 77 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2011 ರ ಫೆಬ್ರವರಿ 4, 5 ಮತ್ತು 6 ರಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಸಲು ತೀಮರ್ಾನಿಸಲಾಗಿದೆ. ನಲವತ್ತು ವರ್ಷಗಳ ನಂತರ ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ನುಡಿ ಜಾತ್ರೆಯಲ್ಲಿ ಭಾಗವಹಿಸಲು ಇಚ್ಚಿಸುವ ಅಭಿಮಾನಿಗಳು ತಮ್ಮ ಹೆಸರುಗಳನ್ನು ಆಯಾಯಾ ಜಿಲ್ಲೆಯ ಜಿಲ್ಲಾಧ್ಯಕ್ಷರುಗಳ ಹತ್ತಿರ ಅಥವಾ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿರುವ ಸಮ್ಮೇಳನ ಸ್ವಾಗತ ಸಮಿತಿ ಕಚೇರಿಯಲ್ಲಿ ರೂ. 250/- ಪ್ರತಿನಿಧಿ ಶುಲ್ಕವನ್ನು ಪಾವತಿಸಿ ತಮ್ಮ ಹೆಸರುಗಳನ್ನು 20-1-2011 ರೊಳಗಾಗಿ ನೋಂದಾಯಿಸಿಕೊಳ್ಳಲು ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಣೆ ತಿಳಿಸಿದೆ.
ಕೃಪೆ:ಈ ಕನಸು 

ಭಾನುವಾರ, ಡಿಸೆಂಬರ್ 12, 2010

ವಿಜಯ ಕರ್ನಾಟಕ ದಲ್ಲಿ ನಾನು ಓದಿದ ಕೆಲವು ಲೇಖನಗಳು

ನಿಮ್ಮ ಮುಂದೇ

ಇಂದಿನ (12-12-2010) ವಿಶೇಷ ಲೇಖನ

ಶನಿವಾರ, ಡಿಸೆಂಬರ್ 11, 2010

ಫೆ.4 ರಿಂದ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

ಬೆಂಗಳೂರು, ಡಿ. 11 : ಕೊನೆಗೂ ಸಾಹಿತ್ಯ ಸಮ್ಮೇಳನಕ್ಕೆ ಮತ್ತೊಂದು ದಿನಾಂಕ ನಿಗದಿಯಾಗಿದೆ. ಫೆ. 4 ರಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ 77ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಲ್ಲೂರು ಪ್ರಸಾದ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಗಳ ಸಲುವಾಗಿ ಡಿ. 24ರಿಂದ ಆರಂಭವಾಗಬೇಕಿದ್ದ ಸಾಹಿತ್ಯ ಸಮ್ಮೇಳನವನ್ನು ಅನಿರ್ದಿಷ್ಟ ಕಾಲದವರಿಗೆ ಮುಂದೂಡಲಾಗಿತ್ತು. ಇದೀಗ ಸಾಹಿತ್ಯ ಸಮ್ಮೇಳನದ ದಿನಾಂಕವನ್ನು ನಿಗದಿಪಡಿಸಲಾಗಿದ್ದು, ಫೆ. 4ರಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದರು.

ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳ ಹಿನ್ನೆಯಲ್ಲಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ 77ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ ಎಂದು ಗೃಹ ಸಚಿವ ಆರ್ ಅಶೋಕ್ ಘೋಷಿಸಿದ್ದರು. ಡಿಸೆಂಬರ್ 24ರಿಂದ ಮೂರು ದಿನಗಳ ಕಾಲ ಬೆಂಗಳೂರು ಸಾಹಿತ್ಯ ಸಮ್ಮೇಳನಕ್ಕೆ ಭರದಿಂದ ಸಿದ್ಧತೆಗಳು ನಡೆದಿದ್ದವು. ಅಷ್ಟರಲ್ಲೇ ದಿಢೀರ್ ಎಂದು ಸಾಹಿತ್ಯ ಸಮ್ಮೇಳನ ಮುಂದೂಡುವ ಘೋಷಣೆ ಹೊರಬಿದ್ದಿತ್ತು.
English summary
Kannada Sahitya Parishat president Dr. Nallur Prasad announced three days All Indian Kannada Meet will starts in Bangalore on Feb.4, 5 and 6. in Bangalore on Saturaday.
ಕೃಪೆ:thatskannada