ಶನಿವಾರ, ಡಿಸೆಂಬರ್ 25, 2010

ಸಾಹಿತ್ಯ ಸಮ್ಮೇಳನಕ್ಕೆ ನೋಂದಣಿ

ಬೆಂಗಳೂರು : 77 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2011 ರ ಫೆಬ್ರವರಿ 4, 5 ಮತ್ತು 6 ರಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಸಲು ತೀಮರ್ಾನಿಸಲಾಗಿದೆ. ನಲವತ್ತು ವರ್ಷಗಳ ನಂತರ ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ನುಡಿ ಜಾತ್ರೆಯಲ್ಲಿ ಭಾಗವಹಿಸಲು ಇಚ್ಚಿಸುವ ಅಭಿಮಾನಿಗಳು ತಮ್ಮ ಹೆಸರುಗಳನ್ನು ಆಯಾಯಾ ಜಿಲ್ಲೆಯ ಜಿಲ್ಲಾಧ್ಯಕ್ಷರುಗಳ ಹತ್ತಿರ ಅಥವಾ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿರುವ ಸಮ್ಮೇಳನ ಸ್ವಾಗತ ಸಮಿತಿ ಕಚೇರಿಯಲ್ಲಿ ರೂ. 250/- ಪ್ರತಿನಿಧಿ ಶುಲ್ಕವನ್ನು ಪಾವತಿಸಿ ತಮ್ಮ ಹೆಸರುಗಳನ್ನು 20-1-2011 ರೊಳಗಾಗಿ ನೋಂದಾಯಿಸಿಕೊಳ್ಳಲು ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಣೆ ತಿಳಿಸಿದೆ.
ಕೃಪೆ:ಈ ಕನಸು